ಮಂಗಳೂರು: ಡಾ.ಪಿ ದಯಾನಂದ ಪೈ – ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರು, ಕೊರಗರ ಜಿಲ್ಲಾ ಸಂಘ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನ ಕಛೇರಿ ಮಂಗಳೂರು ಇವರ ಜಂಟಿ ಸಹಯೋಗದಲ್ಲಿ ಅಂಬೇಡ್ಕರ್ ಯುವ ಮಂಡಲ ಕೋಡಿಕಲ್ ಮಂಗಳೂರು ವತಿಯಿಂದ “ಒಂದು ದಿನದ ಬೇಸಿಗೆ ಶಿಬಿರ”ವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.


ಈ ಶಿಬಿರವು 26-05-2026 ರಂದು ಅಂಬೇಡ್ಕರ್ ಯುವ ಮಂಡಲ ಕೋಡಿಕಲ್ ಮಂಗಳೂರು ಇಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಿತು. ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಹಲವು ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಶಶಿಕಲಾ ಕೋಡಿಕಲ್ ಅವರು ಗಿಡವನ್ನು ನೆಡುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ಮಾಡಿದರು.
ಅವರು ಮಾತನಾಡಿ, ಇಂತಹ ಶಿಬಿರಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು ಹಾಗೂ ಸೃಜನಾತ್ಮಕತೆಯನ್ನು ಬೆಳೆಸಲು ಸಹಕಾರಿ ಆಗುತ್ತದೆ ಎಂದು ಹೇಳಿದರು. ಬಳಿಕ ವಿವಿಧ ಶಿಕ್ಷಣಾತ್ಮಕ ಮತ್ತು ಮನರಂಜನಾ ಚಟುವಟಿಕೆಗಳನ್ನು ನಡೆಸಲಾಯಿತು.
ಶಿಬಿರದಲ್ಲಿ ಭಾಗವಹಿಸಿದ ಮಕ್ಕಳಿಗೆ ಚಿತ್ರಕಲೆ, ಆಟೋಟ ಸ್ಪರ್ಧೆಗಳು, ಹಾಡುಗಾರಿಕೆ, ನೃತ್ಯ, ಗುಂಪು ಚಟುವಟಿಕೆಗಳು ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಕ್ಕಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಕೊರಗರ ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀ ಸುಂದರ ಬೆಳುವಾಯಿ ಅವರು ವಹಿಸಿದ್ದರು. ಮಕ್ಕಳಿಗೆ ಉತ್ತಮ ಶಿಕ್ಷಣದೊಂದಿಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮುದಾಯ ಹಿರಿಯ ದ.ಕ ಕೊರಗರ ಜಿಲ್ಲಾ ಸಂಘದ ಸಂಜೀವ ಕೋಡಿಲ್, ಜಿಲ್ಲಾ ಕ್ಷಯ ನಿರ್ಮೂಲನೆ ಅಧಿಕಾರಿಗಳ ಕಛೇರಿ ಮಂಗಳೂರು ಇದರ ಸಂಯೋಜಕರಾದ ಮನೋಜ್ ಕೊಡಿಕಲ್ ಹಾಗೂ ಡಾ.ಪಿ ದಯಾನಂದ ಪೈ – ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಸಮಾಜ ಕಾರ್ಯ ವಿಭಾಗದ ಸಂಯೋಜಕರು ಶ್ರೀಮತಿ ಅರುಣಾ ಕುಮಾರಿ ಅವರು ಉಪಸ್ಥಿತಿಯಿದ್ದರು. ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಪ್ರವೀಣ್, ಐಶ್ವರ್ಯ, ಗಾಯತ್ರಿ , ಚೈತನ್ಯ , ತನುಶ್ರೀ, ನಾಗಭೂಷಣ್ ಹಾಗೂ ಗೀತಾಂಜಲಿ ರವರು ಸಂಘಟಿಸಿದರು.
ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಮಕ್ಕಳು ಶಿಬಿರದ ಅನುಭವವನ್ನು ಸಂತೋಷದಿಂದ ಹಂಚಿಕೊಂಡರು. ಪೋಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಸಂಘಟಕರಿಂದ ಎಲ್ಲಾ ಅತಿಥಿಗಳು, ಶಿಕ್ಷಕರು, ಪೋಷಕರು ಹಾಗೂ ಸಹಕರಿಸಿದವರಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು. ಈ ಬೇಸಿಗೆ ಶಿಬಿರವು ಮಕ್ಕಳಿಗೆ ಜ್ಞಾನ, ಮನರಂಜನೆ ಮತ್ತು ಉತ್ತಮ ಅನುಭವಗಳನ್ನು ನೀಡಿದ ಅರ್ಥಪೂರ್ಣ ಕಾರ್ಯಕ್ರಮವಾಗಿ ಯಶಸ್ವಿಯಾಗಿ ಪೂರ್ಣಗೊಂಡಿತ್ತು.
