ಸಿಎಂ ಸ್ಥಾನ ಸಿಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ನೊಣವಿನಕೆರೆ ಅಜ್ಜಯ್ಯ ಶಾಕಿಂಗ್ ಎಚ್ಚರಿಕೆಯೊಂದನ್ನು ಕೊಟ್ಟಿದ್ದಾರೆ.


ಸಿಎಂ ಆಗುವುದು ಪಕ್ಕಾ ಆದ ಬಳಿಕ ಡಿಕೆಶಿ ಅವರು ತಾವು ನಂಬುವ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರಿಗೆ ಹಣ್ಣು,ಕಾಯಿ ನೀಡಿ ಅಜ್ಜಯ್ಯ ಆಶೀರ್ವಾದ ಮಾಡಿದ್ದು ಜೊತೆಗೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ.
ಹೌದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಯಾವುದೇ ಮಾತನಾಡದಂತೆ ನೊಣವಿನಕೆರೆ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಶ್ರೀಗಳು ಎಚ್ಚರಿಕೆ ಕೊಟ್ಟಿದ್ದಾರೆ. ಮಾತು ಆಡಿದರೆ ಹೋಯ್ತು ಎಂದು ಎಚ್ಚರಿಸಿದ್ದಾರೆ. ಹೀಗಾಗಿ ತಮಗೆ ಸಿಎಂ ಪಟ್ಟ ಸಿಕ್ಕಿರುವುದರ ಬಗ್ಗೆ ಡಿಕೆ ಶಿವಕುಮಾರ್ ಇದುವರೆಗೆ ಮಾಧ್ಯಮಗಳ ಮುಂದೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ದೆಹಲಿಗೆ ಹೋಗುವ ಡಿಕೆ ಶಿವಕುಮಾರ್, ಎರಡೆರಡು ಬಾರಿ ನೊಣವಿನಕೆರೆ ಅಜ್ಜಯ್ಯದ ಗದ್ದುಗೆಯ ದರ್ಶನವನ್ನು ಪಡೆದಿದ್ದರು. ಅಜ್ಜಯ್ಯನ ಅಪ್ಪಣೆ ಪಡೆಯದೇ ನಾನು ಯಾವ ಕೆಲಸವನ್ನೂ ಮಾಡಲ್ಲ ಎಂದು ಈ ಹಿಂದೆ ಡಿಕೆ ಶಿವಕುಮಾರ್ ಹಲವು ಬಾರಿ ಹೇಳಿದ್ದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಂಡಿತ ಎಂದು ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದರು.

