Home » ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯ ವಿಮಾನ ಜೈಪುರದಲ್ಲಿ ಲ್ಯಾಡಿಂಗ್ – ನಡುವೆ ರೂಟ್ ಚೇಂಜ್ ಆಗಿದ್ದೇಕೆ?

ದೆಹಲಿಗೆ ತೆರಳುತ್ತಿದ್ದ ಸಿದ್ದರಾಮಯ್ಯ ವಿಮಾನ ಜೈಪುರದಲ್ಲಿ ಲ್ಯಾಡಿಂಗ್ – ನಡುವೆ ರೂಟ್ ಚೇಂಜ್ ಆಗಿದ್ದೇಕೆ?

0 comments

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸಿದ್ದರಾಮಯ್ಯ ಅವರು ದೆಹಲಿಯ ಪ್ರವಾಸವನ್ನು ಕೈಗೊಂಡಿದ್ದರು. ಈ ಕಾರಣಕ್ಕಾಗಿ ಅವರ ದೆಹಲಿಯ ವಿಮಾನವನ್ನು ಏರಿದ್ದರು. ಆದರೆ ವಿಮಾನವು ದೆಹಲಿಯನ್ನು ತಲುಪುವ ಬದಲು ಮಾರ್ಗದ ಮಧ್ಯ ಜೈಪುರದಲ್ಲಿ ಲ್ಯಾಂಡಿಂಗ್ ಆಗಿದೆ. ಇದಕ್ಕೆ ಕಾರಣವೂ ಇದೆ.

ಸಿದ್ದರಾಮಯ್ಯ ಅವರ ವಿಮಾನ ಜೈಪುರದಲ್ಲಿ ಲ್ಯಾಂಡ್ ಆಗಲು ಕಾರಣ ಹವಮಾನ ವೈಪರೀತ್ಯ. ಹೌದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ದಿಢೀರನೆ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವು ದೆಹಲಿ ಬದಲಿಗೆ ರಾಜಸ್ಥಾನದ ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.

ಸಿಎಂ ಸಿದ್ದರಾಮಯ್ಯ ಅವರ ಜೊತೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ವಿಮಾನದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ನಂತರ ಅವರು ಮಾರ್ಗದ ನಡುವಿದ್ದ ಅಡಚಡಣೆ ಸುಧಾರಣೆಯಾದ ಬಳಿಕ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಿದ್ದಾರೆ.

You may also like