Home » ಮೈಲಾರ ಲಿಂಗೇಶ್ವರನ ಮುನಿಸು, ಹರಕೆ ತೀರಿಸಿದ ಬಳಿಕ ನನಸಾಯ್ತು ಡಿಕೆಶಿ ಸಿಎಂ ಕನಸು

ಮೈಲಾರ ಲಿಂಗೇಶ್ವರನ ಮುನಿಸು, ಹರಕೆ ತೀರಿಸಿದ ಬಳಿಕ ನನಸಾಯ್ತು ಡಿಕೆಶಿ ಸಿಎಂ ಕನಸು

0 comments

ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಮೈಲಾರದ ಮೈಲಾರಲಿಂಗೇಶ್ವರ ಸುಕ್ಷೇತ್ರಕ್ಕೆ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ್ದ ಸಂದರ್ಭದಲ್ಲಿ ದೇವಾಲಯದ ಗೋಪುರದ ಮೇಲೆ ಹಾಯ್ದು ಬಂದಿದ್ದರಿಂದ ಉಂಟಾದ ದೋಷಕ್ಕೆ ನಂತರ ದೇವಾಲಯಕ್ಕೆ ಬೆಳ್ಳಿಯ ಹೆಲಿಕಾಪ್ಟರ್‌ ಕಾಣಿಕೆಯಾಗಿ ನೀಡಿ ದೋಷ ಪರಿಹಾರ ಮಾಡಿಕೊಂಡಿದ್ದರು.

2018 ರಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಡಿ.ಕೆ.ಶಿವಕುಂಆರ್‌ ಅವರು ಹೆಲಿಕಾಪ್ಟರ್‌ನಲ್ಲಿ ಮೈಲಾರಲಿಂಗೇಶ್ವರ ಮೈಲಾರ ಸುಕ್ಷೇತ್ರಕ್ಕೆ ಬಂದ ಸಂದರ್ಭದಲ್ಲಿ ಆ ಕಾಪ್ಟರ್‌ ದೇವಸ್ಥಾನದ ಗೋಪುರದ ಮೇಲೆ ಹಾಯ್ದು ಬಂದಿದ್ದು, ಕಾರ್ಣಿಕ ಹೇಳುವ ಡೆಂಕಣ ಮರಡಿಯ ಪಕ್ಕದ ಜಮೀನು ಹಾಗೂ ದೇವಸ್ಥಾನದ ಗೋಪುರದ ಮೇಲೆ ಹೆಲಿಕಾಪ್ಟರ್‌ ಹಾರಿ ಹೋಗಿತ್ತು. ಇದರಿಂದ ದೋಷ ಉಂಟಾಗಿದ್ದು, ಪರಿಹಾರಕ್ಕಾಗಿ ದೇವರಿಗೆ ಹರಕೆ ಹೊತ್ತು ಕನಸು ನನಸು ಮಾಡಿಕೊಳ್ಳಬೇಕೆಂದು ಡಿಕೆಶಿ ಅವರಿಗೆ ಹೇಳಲಾಗಿತ್ತು.

ಇದಾದ ನಂತರ ಡಿ.ಕೆ.ಶಿವಕುಮಾರ್‌ ಅವರಿಗೆ ಹಲವು ತೊಂದರೆ, ಆತಂಕ ಉಂಟಾಗಿತ್ತು. ಜೈಲುವಾಸವನ್ನೂ ಅನುಭವಿಸಬೇಕಾಯಿತು. ಹೀಗಾಗಿ 2020 ಡಿಸೆಂಬರ್‌ 18 ರಂದು ಮತ್ತೆ ಮೈಲಾರಕ್ಕೆ ಡಿಕೆಶಿ ಭೇಟಿ ನೀಡಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್‌ ಸಲಹೆಯಂತೆ ಪೂಜೆ ಸಲ್ಲಿಸಿ, ಒಂದು ಕೆಜಿ ತೂಕದ ಬೆಳ್ಳಿಯ ಹೆಲಿಕಾಪ್ಟರನ್ನು ತಪ್ಪು ಕಾಣಿಕೆಯನ್ನಾಗಿ ದೇಣಿಗೆ ನೀಡಿದ್ದರು.

ಈ ಹಿಂದೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದ ಜನಾರ್ದನ ರೆಡ್ಡಿ ಕೂಡಾ ಮೈಲಾರ ಲಿಂಗೇಶ್ವರ ದೇವಸ್ಥಾನದ ಮೇಲೆ ಹೆಲಿಕಾಪ್ಟರ್‌ನಲ್ಲಿ ಬಂದಿದ್ದು, ನಂತರ ಸಾಲು ಸಾಲು ಕಷ್ಟವನ್ನು ಅನುಭವಿಸಿದ್ದರು.

banner

You may also like