ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.


ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.
ಅಣ್ಣಾಮಲೈ ಅವರು 2021 ರಿಂದ 2025 ರವರೆಗೆ ತಮಿಳುನಾಡು ಬಿಜೆಪಿಯನ್ನು ಮುನ್ನಡೆಸಿದ್ದರು, ಆದರೆ ಮೈತ್ರಿಕೂಟದ ಪಕ್ಷವಾದ ಎಐಎಡಿಎಂಕೆ ಜೊತೆಗಿನ ಭಿನ್ನಾಭಿಪ್ರಾಯ ಮತ್ತು ಪಕ್ಷದ ಆಂತರಿಕ ನಿರ್ಧಾರಗಳ ಕಾರಣದಿಂದಾಗಿ ಅವರನ್ನು ಇತ್ತೀಚೆಗೆ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸಲಾಗಿತ್ತು. ಆದರೀಗ ಅವರ ಮುಂದಿನ ರಾಜಕೀಯ ನಡೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
