ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ ಕಾಮಗಾರಿಯ ಸಂದರ್ಭದಲ್ಲಿ ಮಡಂತ್ಯಾರಿನಲ್ಲಿ ಹೆದ್ದಾರಿಯಿಂದ ಮನೆಯ ಸಂಪರ್ಕಕ್ಕೆ ಹೋಗುವ ದಾರಿ ಕಡಿತಗೊಂಡಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದ ಹಿನ್ನೆಲೆ ಇಂದು ಸ್ಥಳಕ್ಕೆ ಹರೀಶ್ ಪೂಂಜಾ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.


ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ಮನೆಗೆ ಸಂಪರ್ಕ ದಾರಿ ಕಲ್ಪಿಸುವಂತೆ ಹಾಗೂ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ನಿರ್ದೇಶನವನ್ನು ನೀಡಿದ್ದು, ಅಭಿವೃದ್ಧಿ ಕಾಮಗಾರಿಗಳು ನಡೆಯುವ ವೇಳೆ ಜನರ ಮೂಲಭೂತ ಸೌಲಭ್ಯಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಭಿಯಂತರರುಗಳಿಗೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.

