Home » ಸಿಎಂ ಡಿಕೆಶಿ ಸಂಪುಟದಲ್ಲಿ ಭುಗಿಲೆದ್ದ ಅಸಮಾಧಾನ! ರಾಮಲಿಂಗಾರೆಡ್ಡಿ ನಂತರ ಇದೀಗ ಮುನಿಯಪ್ಪ ಸರದಿ

ಸಿಎಂ ಡಿಕೆಶಿ ಸಂಪುಟದಲ್ಲಿ ಭುಗಿಲೆದ್ದ ಅಸಮಾಧಾನ! ರಾಮಲಿಂಗಾರೆಡ್ಡಿ ನಂತರ ಇದೀಗ ಮುನಿಯಪ್ಪ ಸರದಿ

0 comments
Annabhagya

ಬೆಂಗಳೂರು; ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಂತರ ಇದೀಗ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ದೇವನಹಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಅವರು, ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆನೇ ಮುಂದುವರಿದರೆ 2028 ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಕಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನಗೆ ಬೇರೆ ಖಾತೆ ನೀಡಬೇಕು. ನಾನು ಕಾಂಗ್ರೆಸ್ ಪಕ್ಷದಲ್ಲಿ ಸೀನಿಯರ್ ಇದ್ದೇನೆ . ಏಳು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ . ನನಗೆ ಬೇರೆ ಖಾತೆ ನೀಡುವಂತೆ ಈಗಾಗಲೇ ವರಿಷ್ಠರ ಗಮನಕ್ಕೆ ತಂದಿದ್ದೇನೆ. ನನ್ನ ಪಕ್ಷ ನಿಷ್ಠೆ ಹೈಕಮಾಂಡ್ ಗೆ ಗೊತ್ತಿದೆ. ರಾಹುಲ್ ಗಾಂಧಿಯವರು ತಾಯಿ ಸ್ಥಾನದಲ್ಲಿದ್ದಾರೆ ಈ ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ದೇವನಹಳ್ಳಿಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

You may also like