ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಹೊರಾಂಗಣದಲ್ಲಿ ಯಾರು ಇಲ್ಲದೆ ಒಬ್ಬಂಟಿಯಾಗಿ ಓಡಾಡುತ್ತಿರುವ ವಿಡಿಯೋವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.


ಹೌದು, ಕೇವಲ ಕೆಲವು ದಿನಗಳ ಹಿಂದೆಯಷ್ಟೇ ಹತ್ತಾರು ಸಚಿವರು, ಶಾಸಕರು ಹಾಗೂ ಬೆಂಬಲಿಗರ ಪಡೆಯೊಂದಿಗೆ ಗತ್ತಿನಿಂದ ಹೆಜ್ಜೆ ಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಒಂಟಿಯಾಗಿ ಓಡಾಡುತ್ತಿರುವ ದೃಶ್ಯವೊಂದು ಇಡೀ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರಿ ಟ್ರೆಂಡಿಂಗ್ನಲ್ಲಿದೆ. ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ನೆಟ್ಟಿಗರನ್ನು ಭಾವುಕರನ್ನಾಗಿಸಿದೆ.
ವಿಧಾನಸೌಧದ ಕಾರಿಡಾರ್ ಹಾಗೂ ಹೊರಾಂಗಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆಲೋಚನೆಯಲ್ಲಿ ಮುಳುಗಿ, ಕೈಗಳನ್ನು ಹಿಂದೆ ಕಟ್ಟಿಕೊಂಡು ಒಬ್ಬರೇ ನಡೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿದೆ. ಸಾಮಾನ್ಯವಾಗಿ ಮುಖ್ಯಮಂತ್ರಿಯಾಗಿದ್ದಾಗ ಅಥವಾ ಅಧಿಕಾರದಲ್ಲಿದ್ದಾಗ ಅವರ ಹಿಂದೆ ನೂರಾರು ಜನರ ದಂಡೇ ಇರುತ್ತಿತ್ತು. ಆದರೆ, ಪ್ರಸ್ತುತ ರಾಜಕೀಯ ಬದಲಾವಣೆಗಳ ನಂತರ ಅವರು ಈ ರೀತಿ ಒಂಟಿಯಾಗಿ ಓಡಾಡುತ್ತಿರುವುದನ್ನು ಕಂಡು ನೆಟ್ಟಿಗರು “ಅಧಿಕಾರ ಹೋದ ಮೇಲೆ ರಾಜಕಾರಣಿಗಳು ಒಬ್ಬಂಟಿಯಾಗುವುದು ಸಹಜ” ಎಂದು ವಿಶ್ಲೇಷಿಸುತ್ತಿದ್ದಾರೆ.
ಯಾರೋ ಅಪರಿಚಿತರಂತೆ ಸಾಗಿದ ನಾಯಕರು
ಇದೇ ವೇಳೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿರುವ ಮತ್ತೊಂದು ಪ್ರಮುಖ ಘಟನೆ ನಡೆದಿದೆ. ವಿಧಾನಸೌಧದ ಆವರಣದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾಗಿದ್ದಾರೆ. ಆದರೆ, ಇಬ್ಬರೂ ಘಟಾನುಘಟಿ ನಾಯಕರು ಪರಸ್ಪರ ಎದುರಾದರೂ ಒಬ್ಬರಿಗೊಬ್ಬರು ಮಾತನಾಡಿಸಿಲ್ಲ ಕನಿಷ್ಠ ಸೌಜನ್ಯದ ನಗು ಅಥವಾ ಹಸ್ತಲಾಘವವನ್ನೂ ಮಾಡದೆ, ಯಾರೋ ಅಪರಿಚಿತರಂತೆ ಇಬ್ಬರೂ ತಮ್ಮ ಪಾಡಿಗೆ ತಾವು ಮುಂದೆ ಸಾಗಿ ಹೋಗಿದ್ದಾರೆ. ಇಬ್ಬರು ನಾಯಕರ ನಡುವಿನ ಈ ಮೌನ ಮತ್ತು ಶೀತಲ ಸಮರವು ಸದ್ಯ ವಿಧಾನಸೌಧದ ಅಂಗಳದಲ್ಲಿ ಭಾರಿ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ.
ವಿಡಿಯೋ 👇
https://x.com/i/status/2062919373266760148

