ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೊಳಿಸಿರುವ ಶಕ್ತಿ ಯೋಜನೆಯ ಅತ್ಯಂತ ಯಶಸ್ವಿಯಾಗಿ ಮುನ್ನಡೆದುಕೊಂಡು ಸಾಗುತ್ತಿದೆ. ಈ ನಡುವೆ ಡಿಕೆಶಿ ಸರ್ಕಾರ ಆಡಳಿತಕ್ಕೆ ಬಂದಿದ್ದು, ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಹತ್ವದ ಘೋಷಣೆಯೊಂದನ್ನು ಹೊರಡಿಸಿದ್ದಾರೆ.


ಸಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊಲದ ಬಾರಿಗೆ KSRTC ಕೇಂದ್ರ ಕಚೇರಿಯಲ್ಲಿ ನಾಲ್ಕು ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವರು, ಈಗಾಗಲೇ ಮಹಿಳೆಯರಿಗಾಗಿ ಶಕ್ತಿ ಯೋಜನೆ ನೀಡಲಾಗಿದ್ದು, ಯಶಸ್ವಿಯಾಗಿ ಶಕ್ತಿ ಯೋಜನೆ ಮುಂದುವರೆದಿದೆ. ಈ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ರಾಜ್ಯದ ಎಲ್ಲರ ಮಹಿಳೆಯರಿಗೆ ಉಚಿತ ಪ್ರಯಾಣಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಬಳಿಕ ನಮ್ಮ ಸರ್ಕಾರದಿಂದ ಪುರುಷರಿಗೂ ಸಹಾಯವವಾಗುವ ನಿಟ್ಟಿನಲ್ಲಿ ಪುರುಷ ಪ್ರಯಾಣಿಕರಿಗೂ ಸ್ಮಾರ್ಟ್ ಕಾಡ್ ನೀಡಲು ತೀರ್ಮಾನಿಸಲಾಗಿದೆ. ಒಟ್ಟಾರೆ ರಾಜ್ಯದ ಮೂರು ಕೋಟಿ ಜನರಿಗೂ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸಲು ಸೂಚಿಸಲಾಗಿದೆ. ಮಹಿಳಾಮಣಿಯರು ಶಕ್ತಿ ಸ್ಮಾರ್ಟ್ಕಾರ್ಡ್ ಬಳಸಿ ಉಚಿತ ಪ್ರಯಾಣ ಬೆಳಸಹುದು. ಇನ್ನೂ ಅದೇ ರೀತಿ ಪುರುಷರು ಕೂಡ ಸ್ಮಾರ್ಟ್ ಕಾರ್ಡ್ಗೆ ರಿಚಾರ್ಜ್ ಮಾಡಿ ಟಿಕೆಟ್ ದರ ಪಾವತಿಸುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
