Home » ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ಹೃದಯಾಘಾತದಿಂದ ನಿಧನ!

ಕರ್ತವ್ಯ ನಿರತ ಮಿತ್ತೂರಿನ ಮೆಸ್ಕಾಂ ಉದ್ಯೋಗಿ ಹೃದಯಾಘಾತದಿಂದ ನಿಧನ!

0 comments

ವಿಟ್ಲ: ಕರ್ತವ್ಯದಲ್ಲಿದ್ದಾಗಲೇ ಮೆಸ್ಕಾಂ ಉದ್ಯೋಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಎಂಬಲ್ಲಿ ನಡೆದಿದೆ.

ಮೂಲತಃ ಮಿತ್ತೂರು ನಿವಾಸಿ ಚಂದ್ರಶೇಖರ ನಾಯ್ಕ (55 ವ.) ಮೃತ ದುರ್ದೈವಿ. ಅವರು ಮೆಸ್ಕಾಂ ಪಾಣೆಮಂಗಳೂರು ಶಾಖೆಯಲ್ಲಿ ಸಹಾಯಕ ಮೆಕ್ಯಾನಿಕ್ ಹುದ್ದೆ ನಿರ್ವಹಿಸುತ್ತಿದ್ದರು.

ಜೂ.10ರಂದು ಮಧ್ಯಾಹ್ನ ವೇಳೆ ಶಂಭೂರು ಸಮೀಪದ ಕುಂದಾಯಗೋಳಿ ಎಂಬಲ್ಲಿ ವಿದ್ಯುತ್‌ ಕಂಬವೊಂದು ತುಂಡಾಗಿ ಬಿದ್ದು ವಿದ್ಯುತ್ ಸಂಪರ್ಕಕಡಿತಗೊಂಡಿರುವ ಹಿನ್ನೆಲೆಯಲ್ಲಿ ಕಂಬವನ್ನು ಅಳವಡಿಸಿ ವಿದ್ಯುತ್‌ ತಂತಿಗಳನ್ನು ಎಳೆದು ಸಂಪರ್ಕ ನೀಡಿದ್ದರು.

ಆ ಬಳಿಕ ಅಲ್ಲಿಂದ ಇನ್ನೊಂದು ಕಡೆ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗೆ ಕರೆ ಬಂದ ಕಾರಣ ಇಲಾಖೆಯ ಸಿಬ್ಬಂದಿ ಜೊತೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕುಂದಾಯಗೋಳಿ ಎಂಬಲ್ಲಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಅವರನ್ನು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು.

banner

ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿದಾಗ ಅವರು ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

 

You may also like