Home » ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾ‌ರ್ ವಿಧಿವಶ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾ‌ರ್ ವಿಧಿವಶ

0 comments

ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು.

ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತಿದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ದೈಹಿಕ ಶಿಕ್ಷಕರಾಗಿ ಹೆಸರು ಗಳಿಸಿದ್ದರು. ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿಯಾಗಿ, ತಾಲೂಕಿನ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದರು.

ಮೃತರು ಪತ್ನಿ ಶಿಕ್ಷಕಿ ಜ್ಯೋತಿ ಅಖಿಲ್ ಕುಮಾರ್, ಮಕ್ಕಳಾದ ಒರ್ವೆ ಪುತ್ರಿ, ಓರ್ವ ಪುತ್ರ, ಸಹೋದರ ಅಮ‌ರ್, ಸಹೋದರಿ ಅನಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

You may also like