ಬೆಳ್ತಂಗಡಿ: ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ನಾರಾವಿ, ಕುತ್ಲೂರು, ಸುಲ್ಕೇರಿ, ಸವಣಾಲು, ನಡ, ಮಲವಂತಿಗೆ ಗ್ರಾಮದ ಮಲೆಕುಡಿಯ ಕಾಲೋನಿಗಳು ವಿದ್ಯುತ್ ಸಂಪರ್ಕ ಇಲ್ಲದೆ ಆಧುನಿಕ ಜಗತ್ತಿನಿಂದ ದೂರವೇ ಉಳಿದಿವೆ.


ಈ ಕಾಲೋನಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಪರಿವೇಶ್ ಪೋರ್ಟಲ್ ನಲ್ಲಿ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಸರ್ಕಾರದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಂಜುಮ್ ಪರ್ವೇಜ್ ಅವರನ್ನು ಭೇಟಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಲೆಕುಡಿಯ ಸಮುದಾಯದ ಮುಖಂಡರಾದ ಹರೀಶ್ ಎಳನೀರು ಅವರು ಜೊತೆಗಿದ್ದರು.
