Home » ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು – ಸಿಎಂ ಡಿ.ಕೆ. ಶಿವಕುಮಾರ್!!

ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಬೇಕು – ಸಿಎಂ ಡಿ.ಕೆ. ಶಿವಕುಮಾರ್!!

0 comments

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಅತ್ಯಂತ ಪ್ರಮುಖವಾದದ್ದು. ಈ ಯೋಜನೆಯಡಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಕೊಡಮಾಡಲಾಗುತ್ತದೆ. ಆದರೆ ಇಂದು ಅನೇಕ ಕುಟುಂಬಗಳು ಈ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಯೋಜನೆಯ ಫಲಾನುಭವಿ ಮನೆಯ ಯಜಮಾನಿ(ಮಹಿಳೆ) ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ.

ಶನಿವಾರ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಬಳಿಕ  ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು  ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ ಹೆಸರಲ್ಲಿ ಬೇರೆಯವರು 100ಕೋಟಿ ರೂಪಾಯಿಗೂ ಹೆಚ್ಚು ಹಣ ಪಡೆದಿರುವುದು ಸರಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಅಥವಾ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಹೀಗಾಗಿ ಎಲ್ಲ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಅಲ್ಲದೆ ಗೃಹಲಕ್ಷ್ಮಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶವು ರಾಜ್ಯ ಸರಕಾರಕ್ಕಿಲ್ಲ. ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದು ಸರಕಾರದ ಉದ್ದೇಶ. ಹೀಗಾಗಿ, ಗೃಹಲಕ್ಷ್ಮೀ ಯೋಜನೆಯ ಎಲ್ಲ ಫಲಾನುಭವಿಗಳು ಮತ್ತೆ ಅರ್ಜಿ ಹಾಕಬೇಕಿದೆ ಎಂದು ತಿಳಿಸಿದರು.

You may also like