ಕಾಂಗ್ರೆಸ್ ಶಾಸಕ ಡಿಕೆಶಿ ಪರಮಾಪ್ತ ಇಕ್ಬಾಲ್ ಹುಸೇನ್ ಗೆ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯಕ್ಕೆ ಸ್ಟಂಟ್ ಅಳವಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.


ನಗರದ ವೈದೇಹಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನಿಡಲಾಗುತ್ತಿದೆ. ಸಿಎಂ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡುವ ಸಂಭವವಿದೆ.
ಇಕ್ಬಾಲ್ ಹುಸೇನ್ ಅವರು ಡಿ.ಕೆ. ಶಿವಕುಮಾರ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದು, ಹಲವು ಬಾರಿ ಆಗಿನ ಸಿಎಂ ಸಿದ್ದರಾಮಯ್ಯ ಅವರನ್ನು ವಿರೋಧಿಸಿ, ಡಿ.ಕೆ. ಶಿವಕುಮಾರ್ ಅವರೇ ಸಿಎಂ ಆಗಬೇಕೆಂದು ಬಹಿರಂಗ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
