ಗುರುವಾಯನಕೆರೆ: ಪಿಲಿಚಂಡಿಕಲ್ಲು ಶಾಲೆ ಬಳಿ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾದ ಘಟನೆ ಜೂ.16 ರಂದು ನಡೆದಿದೆ.


ಚಿಕ್ಕಮಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಿಲಿಚಂಡಿಕಲ್ಲು ಶಾಲೆ ಎಂಬಲ್ಲಿ ಮಂಗಳೂರಿನಿಂದ ಬರುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡಿತು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಬೈಕ್ ಸವಾರ ರಸ್ತೆಗೆ ತೆರಳಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಇದ್ದ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
