Home » 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

0 comments

ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು ಉತ್ಪಾದಕರ ಸಂಘದ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ಜೀವನ್ ಕೊಲ್ಯ ಮಾತನಾಡಿ  “ಮಹಿಳೆಯರು ಕಾಲಕ್ಕೆ ತಕ್ಕಂತ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ತರಬೇತಿ ಕಲಿತು ಸ್ವ ಉದ್ಯೋಗ ಮಾಡಬೇಕು.ಬೇಡಿಕೆ ಇರುವಾಗ ಮನೆಯಲ್ಲಿ ಉದ್ಯೋಗ ಮಾಡಿ ಉತ್ತಮ ಆದಾಯ ಗಳಿಸಲು ಸಾಧ್ಯವಿದೆ” ಎಂದರು. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ಜ್ಯೋತಿ ರಾಜ್ ಇವರು ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಹಿಳೆಯರ ಸ್ವ ಉದ್ಯೋಗ ಮಾಡಲು  ನಮ್ಮ ಸಂಸ್ಥೆ ಸದಾ ನೆರವು ನೀಡಲಿದೆ ಎಂದರು. 

ಬೆಳ್ತಂಗಡಿ ತಾಲೂಕು ಅಮೂಲ್ಯ ಸಾಕ್ಷರತಾ ಸಮಾಲೋಚಕರಾದ ಶ್ರೀಮತಿ ಉಷಾ ಕಾಮತ್ ತರಬೇತಿಯ ನಂತರದ ಅವಕಾಶಗಳ ಬಗ್ಗೆ , ಬ್ಯಾಂಕ್ ನಿಂದ ಸಿಗುವ ಬ್ಯಾಂಕ್ ಸಾಲ ಸೌಲಭ್ಯ ಬಗ್ಗೆ ವಿವರಿಸಿದರು.  ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ದೀಕ್ಷಾ ಇವರು ತರಬೇತಿ ನೀಡಿದ ಅನುಭವ ಹಂಚಿಕೊಂಡರು. ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿ ಶ್ರೀಮತಿ ಮೀನಾಕ್ಷಿ, ತರಬೇತುದಾರರಾದ  ಶ್ರೀಮತಿ ಅಕ್ಷಿತಾ, ತಣ್ಣೀರು ಪಂಥ ಹಾಲು ಸೊಸೈಟಿ ಕಾರ್ಯದರ್ಶಿ ಶ್ರೀ ಜಯರಾಜ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಯಶಸ್ವಿಯಾಗಿ ತರಬೇತಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು .ಶ್ರೀಮತಿ ಗುಣವತಿ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಮಲ್ಲಿಕಾ ಸ್ವಾಗತಿಸಿ, ಶ್ರೀಮತಿ ವಿನೋದಾ ವಂದಿಸಿದರು.

banner

You may also like