ತನ್ನದೇ ಟಿಪ್ಪರ್ ಹರಿದು ಅದರ ಚಾಲಕ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಾದೆಕಲ್ಲು ಎಂಬಲ್ಲಿ ನಡೆದಿದೆ.


ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಪಾದೆಕಲ್ಲು ಎನ್ನುವ ಪ್ರದೇಶದಲ್ಲಿ ಟಿಪ್ಪರ್ ಚಾಲಕ ತನ್ನ ಟಿಪ್ಪರ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಟಿಪ್ಪರ್ ಅಡಿಭಾಗಕ್ಕೆ ಬಂದು ಪರಿಶೀಲನೆ ನಡೆಸುವ ಸಮಯದಲ್ಲಿ ಟಿಪ್ಪರ್ ತನ್ನಿಂದ ತಾನೇ ಮುಂದೆ ಚಲಿಸಿ ಅಡಿಭಾಗದಲ್ಲಿದ್ದ ಚಾಲಕನ ಮೇಲೆ ಹರಿದಿದೆ. ಇದರಿಂದಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ವಿಟ್ಲ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
