Home » ಕೋಡಿ ಬೀಚ್‌ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲು!

ಕೋಡಿ ಬೀಚ್‌ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲು!

0 comments

ಉಡುಪಿ, ಜೂನ್ 19: ಸ್ನೇಹಿತರ ಜೊತೆ ಕರಾವಳಿ
ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಉಡುಪಿ ಜಿಲ್ಲೆಯ ಕೋಡಿ ಬೀಚ್‌ನಲ್ಲಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಬೆಂಗಳೂರಿನ ರಾಜಾಜಿನಗರ ನಿವಾಸಿ ನಿಖಿಲ್ ಕುಮಾರ್ (32) ಎಂದು ಗುರುತಿಸಲಾಗಿದೆ. ನಿಖಿಲ್ ತನ್ನ 9 ಮಂದಿ ಸ್ನೇಹಿತರ ಜೊತೆ ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ಬಂದಿದ್ದು,
ಬ್ರಹ್ಮಾವರ ತಾಲೂಕಿನ ಕೋಡಿ ಬೀಚ್‌ನಲ್ಲಿ ಸ್ನೇಹಿತರೊಂದಿಗೆ ಸಮಯ ಕಳೆಯುತ್ತಿದ್ದ ವೇಳೆ ನಿಖಿಲ್ ಸಮುದ್ರಕ್ಕೆ ಇಳಿದು ಈಜಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪ್ರಬಲ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರದೊಳಗೆ ಕೊಚ್ಚಿಹೋಗಿದ್ದಾರೆ.

ಘಟನೆ ತಿಳಿದ ಕೂಡಲೇ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ದೋಣಿಯ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ಸಮಯದ ಬಳಿಕ ನಿಖಿಲ್ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಹಚ್ಚಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

banner

You may also like