ಪೆರ್ನಾಜೆ: ಇಲ್ಲಿಯ ಸ್ವರೂಪ ಶಿಕ್ಷಣ ಸಾಧನ ಕೇಂದ್ರದಲ್ಲಿ ಜೂನ್ 19ರಂದು ಶಾಲಾ ಸಂಸತ್ತು ರಚನೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.


ಕಾರ್ಯಕ್ರಮಕ್ಕೆ ಹಿಪ್ನೊ ಥೆರಪಿಸ್ಟ್ರಾದ ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ನಮ್ಮ ಒಳಗಿರುವ ಸ್ವರೂಪ ಸೀತಾರಾಘವ ಸಂಸ್ಥೆಯ ಮೂಲಕ ಕಿಡಿ ಹಚ್ಚಿ ಇಡೀ ಜಗತ್ತಿಗೆ ಪ್ರಜ್ವಲಿಸುತ್ತದೆ ಎಂದು ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಜೊತೆಗೆ ನಾಗರಾಜ್ ಹಾಗೂ ವನಜಾಕ್ಷಿ ಬೆಂಗಳೂರು ಅವರು ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು.
ನೂತನವಾಗಿ ಆಯ್ಕೆಯಾದ ಶಾಲಾ ಸಂಸತ್ ಸದಸ್ಯರು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರತಿಜ್ಞಾ ವಿಧಿಯನ್ನು ಸಂಸ್ಥೆ ಶೈಕ್ಷಣಿಕ ಮಾರ್ಗದರ್ಶಿಗಳಾದ ಶ್ರೀಮತಿ ಸುಮಂಗಲ ನಡೆಸಿಕೊಟ್ಟರು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಶಿಸ್ತು ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸುವ ಉದ್ದೇಶವನ್ನು ಅತಿಥಿಗಳು ವಿವರಿಸಿದರು.
ಶಾಲಾ ಆವರಣವು ಸಂಭ್ರಮ ಮತ್ತು ಉತ್ಸಾಹದಿಂದ ಕಂಗೊಳಿಸುತ್ತಿತ್ತು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಶಿಸ್ತಿನಿಂದ ಭಾಗವಹಿಸಿ ಮೆಚ್ಚುಗೆ ಪಡೆದರು. ಕಾರ್ಯಕ್ರಮದ ನಿರೂಪಣೆಯನ್ನು ಅಭಿಜ್ಞಾ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು. ಕೀರ್ತನ ಅವರು ಅತಿಥಿಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಆದೀಶ್ ಅವರು ವಂದಿಸಿದರು.

