Home » ಕರಾವಳಿಯಲ್ಲಿ ಈ ದಿನದಿಂದ ಮುಂಗಾರು ಚುರುಕು- ‘ಯೆಲ್ಲೋ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

ಕರಾವಳಿಯಲ್ಲಿ ಈ ದಿನದಿಂದ ಮುಂಗಾರು ಚುರುಕು- ‘ಯೆಲ್ಲೋ ಅಲರ್ಟ್‌’ ಘೋಷಿಸಿದ ಹವಾಮಾನ ಇಲಾಖೆ

0 comments

ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರತೆ ಕಳೆದುಕೊಂಡಿರುವ ನಡುವೆಯೇ ಮುಂದಿನ ಐದು ದಿನಗಳ ಕಾಲ ಅಂದರೆ ಜೂನ್ 24ರವರೆಗೆ ರಾಜ್ಯದ ಹಲವೆಡೆ ಭರ್ಜರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯ ಸ್ಥಿತಿಯಲ್ಲಿದ್ದು, ಇಂದಿನಿಂದ ಅಂದರೆ ಜೂನ್ 21ರಿಂದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ತೀವ್ರಗೊಳ್ಳಲಿವೆ. ಇದರಿಂದಾಗಿ ಈ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. 

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 21 ರಿಂದ ಮುಂಗಾರು ಆರ್ಭಟ ಹೆಚ್ಚಾಗಲಿದ್ದು, ಕರಾವಳಿ ಜಿಲ್ಲೆಗಳಿಗೆ ಜೂನ್ 21ರಿಂದ 24ರವರೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಇದೇ ವೇಳೆ ಒಳನಾಡು ಜಿಲ್ಲೆಗಳಲ್ಲೂ ಜೂನ್ 22 ಮತ್ತು 23ರಂದು ಉತ್ತಮ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

You may also like