ಬೆಂಗಳೂರು; ಕೆಪಿಸಿಸಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಿಂದೂ ರಾಷ್ಟ್ರ ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು ಎಂದು ಹೇಳಿದ್ದಾರೆ.


ಬಿಜೆಪಿಯವರು ಒಂದು ಧರ್ಮ – ಒಂದು ರಾಷ್ಟ್ರ- ಒಂದು ಚುನಾವಣೆ ಎಂಬ ಮಾತುಗಳನ್ನು ಹೇಳುತ್ತಾರೆ. ಬಿಜೆಪಿಯವರು ಸರ್ವಾಧಿಕಾರದ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ. ಯಾಕಂದರೆ ಆರ್ಎಸ್ಎಸ್ನ ಸಂಸ್ಥಾಪಕ ಹೆಗ್ಡೆವಾರ್ ಅವರು ತಮ್ಮ ಸ್ನೇಹಿತರನ್ನು ವಿದೇಶಕ್ಕೆ ಕಳುಹಿಸಿ ಇಟಲಿಯ ಮುಸಲೋನಿ, ಜರ್ಮನಿಯ ಹಿಟ್ಲರ್ ಅವರ ಆಡಳಿತನ್ನು ಈ ದೇಶದಲ್ಲಿ ಹುಟ್ಟುಹಾಕಲು ಪ್ರಯತ್ನವನ್ನು ಮಾಡಿದ್ದರು. ಬಿಜೆಪಿಯವರಿಗಾಗಲಿ, ಆರ್ಎಸ್ಎಸ್ನವರಿಗಾಗಲಿ ನಮ್ಮ ಸಂವಿಧಾನದ ಬಗ್ಗೆ ನಂಬಿಕೆಯಿಲ್ಲ. ಈ ದೇಶದಲ್ಲಿ ಸಂವಿಧಾನದ ವಿರೋಧಿಗಳು ಯಾರಾದರೂ ಇದ್ದರೆ ಅದು ಆರ್ಎಸ್ಎಸ್ ಮತ್ತು ಬಿಜೆಪಿಯವರು ಎಂಬುದನ್ನು ನಾವು ಮರೆಯಲು ಸಾಧ್ಯವಿಲ್ಲ. ಅದಕ್ಕಾಗಿ ಹಿಂದೂರಾಷ್ಟ್ರ ಮಾಡಲು ಮುಂದಾಗಿದ್ದಾರೆ. ಅದನ್ನು ಮಾಡಲು ನಮ್ಮ ಕಾರ್ಯಕರ್ತರು ಬಿಡಬಾರದು. ನಾವು ಯಾವಾಗಲೂ ಬಹುತ್ವದ ಪರವಾಗಿ ಇರುವಂತವರು. ಬಹುತ್ವವನ್ನು ರೂಪಿಸುವಂತಹ ಕೆಲಸವನ್ನು ಹಾಗೂ ಅದನ್ನು ಮುಂದುವರಿಸಿಕೊಂಡು ಹೋಗುವಂತಹ ಕೆಲಸ ನಮ್ಮದಾಗಿದೆ ಎಂದು ಹೇಳಿದರು.
