Home » ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಲ್ಲಿದ್ದ 40 ಸಿಬ್ಬಂದಿ ವಜಾ

ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಲ್ಲಿದ್ದ 40 ಸಿಬ್ಬಂದಿ ವಜಾ

0 comments

ಅಯೋಧ್ಯೆ, ಜೂ.22: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಕಾಣಿಕೆ ಹಣ ಹಾಗೂ ಆಭರಣಗಳ ಎಣಿಕೆಯಲ್ಲಿ ಭಾರೀ ಅಕ್ರಮ ಮತ್ತು ಕಳ್ಳತನ ನಡೆದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದೇಣಿಗೆ ಎಣಿಕೆ ಪ್ರಕ್ರಿಯೆಯಲ್ಲಿದ್ದ ಸುಮಾರು 40 ಸಿಬ್ಬಂದಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದು ಹಾಕಲಾಗಿದೆ.

ಬ್ಯಾಂಕ್‌ ಟ್ರಸ್ಟ್‌ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿದ್ದು, ಕಟ್ಟುನಿಟ್ಟಿನ ಮೇಲ್ವಿಚಾರಣೆ ಮಾಡಲಾಗಿದೆ. ಇನ್ನೊಂದು ಕಡೆ ಆರು ದಿನಗಳ ಕಾಲ ಅಯೋಧ್ಯೆಯಲ್ಲೇ ಬೀಡುಬಿಟ್ಟು ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ಇಂದು ತನ್ನ ಪ್ರಾಥಮಿಕ ವರದಿಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಸಲ್ಲಿಸಿದೆ.

ತನಿಖೆ ಮುಗಿಯುವವರೆಗೆ ಯಾರೂ ಕೂಡಾ ಅಯೋಧ್ಯೆ ನಗರವನ್ನು ಬಿಟ್ಟು ಹೊರಗಡೆ ಹೋಗಬಾರದು ಎಂದು ಎಸ್‌ಐಟಿ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಮಶಂಕರ್‌ ಯಾದವ್‌ ಅಲಿಯಾಸ್‌ ಟಿನ್ನು ಎನ್ನುವಾತನನ್ನು ಎಸ್‌ಐಟಿ ಪದೇ ಪದೇ ವಿಚಾರಣೆ ಮಾಡುತ್ತಿದೆ. ಈತ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಅವರ ಸಹಚರ.

You may also like