19 ವರ್ಷದ ನವ ವಿವಾಹಿತೆಯೊಬ್ಬಳು ಅನುಮಾನಸ್ಪದ ರೀತಿಯಲ್ಲಿ ಸವನ್ನಪ್ಪಿರುವ ಘಟನೆ ದಾವಣಗೆರೆಯ ರಾಮನಗರದಲ್ಲಿ ನಡೆದಿದೆ.


ದಾವಣಗೆರೆ ತಾಲೂಕು ಕೈದಾಳೆ ಗ್ರಾಮದ ನಿವಾಸಿ 19ರ ಹರೆಯದ ಅಮೂಲ್ಯ ಶವವಾಗಿ ಪತ್ತೆಯಾಗಿದ್ದಾಳೆ. ಬಾಡಿಗೆ ಮನೆಯಲ್ಲಿ ಅಮೂಲ್ಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಬೆನ್ನಲ್ಲೇ ಅಮೂಲ್ಯ ಪತಿ ಧನುಷ್ ಹಾಗೂ ಆತನ ಪೋಷಕರು ನಾಪತ್ತೆಯಾಗಿದ್ದಾರೆ. ದಾವಣೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೂಲ್ಯ ಹಾಗೂ ಧನುಷ್ ಪ್ರೀತಿ ಮಾಡುತ್ತಿದ್ದರು. ಅಪ್ರಾಪ್ತ ವಯಸ್ಸಿನಲ್ಲಿ ಧನುಷ್ ಪ್ರೀತಿಯ ಬಲೆಗೆ ಬಿದ್ದಿದ್ದ ಅಮೂಲ್ಯ 18 ತುಂಬಿದ ಬೆನ್ನಲ್ಲೇ ಮದುವೆಯಾಗಿದ್ದರು. ಮದುವೆಯಾದ ಒಂದೇ ವರ್ಷಕ್ಕೆ ಸಂಸಾರದಲ್ಲಿ ಕಲಹಗಳು ಏರ್ಪಟ್ಟಿವೆ. ಮೃತ ಅಮೂಲ್ಯ ಪತಿ ಧನುಷ್ ದಾವಣಗೆರೆಯ ಹೂವಿನ ಮಾರುಕಟ್ಟೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಅವರಿಬ್ಬರೂ ರಾಮನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು
ಆದರೆ ಜೂನ್ 20ರ ರಾತ್ರಿ ಅಮೂಲ್ಯ ಮೃತದೇಹ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ. ಮಗಳ ಸಾವಿನ ಸುದ್ದಿ ಕೇಳಿ ಪೋಷಕರು ಕಂಗಾಲಾಗಿದ್ದಾರೆ. ಅಮೂಲ್ಯ ಪತಿ ಧನುಷ್ ಹಾಗೂ ಆತನ ಪೋಷಕರ ವಿರುದ್ದ ಆರೋಪಗಳು ಕೇಳಿಬಂದಿದೆ. ಇತ್ತ ಪೋಷಕರು ದಾವಣೆಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಧನುಷ್ ಹಾಗೂ ಆತನ ಪೋಷಕರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

