Home » ಬಿ ಕೆ ಹರಿಪ್ರಸಾದ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೇಕೆ ಗೊತ್ತೇ? ಅಸಲಿ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

ಬಿ ಕೆ ಹರಿಪ್ರಸಾದ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೇಕೆ ಗೊತ್ತೇ? ಅಸಲಿ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

0 comments

ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರನ್ನಾಗಿ ಬಿ ಕೆ ಹರಿಪ್ರಸಾದ್ ಅವರನ್ನೇ ಆರಿಸಿದ್ದೇಕೆ ಎಂದು ಬಗ್ಗೆ ಅಸಲಿ ಕಾರಣ ಬಿಚ್ಚಿಟ್ಟಿದ್ದಾರೆ.

ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು “ಬಿ.ಕೆ.ಹರಿಪ್ರಸಾದ್ ಅವರನ್ನು ಕೇವಲ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಕ್ಷರನ್ನಾಗಿ ಮಾಡಿಲ್ಲ. ಅದಕ್ಕಿಂತಲೂ ಮಿಗಿಲಾಗಿ ನಮ್ಮ ಪಕ್ಷದ ಜಾತ್ಯತೀತ ತತ್ವಗಳು ಮತ್ತು ಸಿದ್ಧಾಂತಗಳು ಪ್ರತಿಯೊಬ್ಬರಿಗೂ ತಲುಪಬೇಕಿದೆ. ಸಮಾಜದಲ್ಲಿ ಇಂದು ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಲ್ಲದವರು ಹೆಚ್ಚಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪಕ್ಷದ ಸಿದ್ಧಾಂತವನ್ನು ಗಟ್ಟಿಗೊಳಿಸುವ ಅಗತ್ಯವಿದೆ. ಹರಿಪ್ರಸಾದ್ ಅವರು ಎಂದಿಗೂ ಕೋಮುವಾದಿ ಶಕ್ತಿಗಳ ಜೊತೆ ರಾಜಿ ಮಾಡಿಕೊಂಡವರಲ್ಲ. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮರುಸ್ಥಾಪಿಸಿ ದೇಶವನ್ನು ಮುನ್ನಡೆಸುವ ಕೆಲಸವನ್ನು ಅವರು ಯಶಸ್ವಿಯಾಗಿ ಮಾಡಲಿದ್ದಾರೆ ಎಂಬ ನಂಬಿಕೆ ನನಗಿದೆ. ಈ ದೃಷ್ಟಿಯಿಂದಲೇ ಅವರನ್ನು ಕೆಪಿಸಿಸಿ ಸಾರಥಿಯನ್ನಾಗಿ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

You may also like