Home News ದ.ಕ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಕರ್ಫ್ಯೂ ಜಾರಿ

ದ.ಕ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಕರ್ಫ್ಯೂ ಜಾರಿ

Hindu neighbor gifts plot of land

Hindu neighbour gifts land to Muslim journalist

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದ್ದು, ಈ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಾಗಲಿದೆ. ಇದರೊಂದಿಗೆ ರಾಜ್ಯದಲ್ಲಿ ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಬಿಗಿಯಾಗಿ ಜಾರಿಗೊಳ್ಳಲಿದೆ.

ಈಗಾಗಲೇ ಗಡಿ ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಅಳವಡಿಸಲಾಗಿದ್ದು, ವಾರಾಂತ್ಯದ ಕರ್ಫ್ಯೂ ಸೇರಿ ಮತ್ತಷ್ಟು ಬಿಗಿ ಕ್ರಮಗಳು ಜಾರಿಯಾಗಲಿವೆ ಎಂದು ತಿಳಿದುಬಂದಿದೆ.

ನಾಳೆ ಏನಿರುತ್ತೆ, ಏನಿರಲ್ಲ?

*ಸರ್ಕಾರಿ ಕಚೇರಿ ಹಾಗೂ 24 ಗಂಟೆ ಕಾರ್ಯಾಚರಿಸುವ
ಕೈಗಾರಿಕೆಗೆ ಅನುಮತಿ

*ಬೆಳಗ್ಗೆ 5ರಿಂದ ಮಧ್ಯಾಹ್ನ 2ರ ತನಕ ಅಗತ್ಯ ವಸ್ತು ಪಡೆಯಲು ಅವಕಾಶ. (ಹಾಲು, ದಿನಸಿ, ಮೀನು, ಮಾಂಸ, ಹಣ್ಣು-ಹಂಪಲು ಮಾರಾಟಕ್ಕೆ ಅನುಮತಿ)

*ಮದ್ಯ ಮಾರಾಟ – ಪಾರ್ಸೆಲ್ ಮಾತ್ರ ಅವಕಾಶ (ಬೆಳಗ್ಗೆ 5ರಿಂದ ಮಧ್ಯಾಹ್ನ 2)

*ಹೋಟೆಲ್, ರೆಸ್ಟೋರೆಂಟ್‌ನಲ್ಲಿ ಪಾರ್ಸೆಲ್, ಹೋಂ ಡೆಲಿವರಿಗೆ ಅವಕಾಶ

*ರಾಜಕೀಯ, ಕ್ರೀಡೆ, ಮನೋರಂಜನೆ, ಸಾಂಸ್ಕೃತಿಕ,
ಧಾರ್ಮಿಕ ಸಭೆ, ಸಮಾರಂಭ ನಿಷೇಧ

*ವಿಮಾನ ನಿಲ್ದಾಣ, ರೈಲ್ವೆ ಪ್ರಯಾಣಕ್ಕೆ ಅನುಮತಿ – ಪ್ರಯಾಣದ ಟಿಕೆಟ್ ಕಡ್ಡಾಯ

*ಮದುವೆ 100 ಜನರೊಂದಿಗೆ ನಡೆಸಲು ಅವಕಾಶ

*ಅಂತಿಮ ಸಂಸ್ಕಾರಕ್ಕೆ 20 ಜನರಿಗೆ ಅವಕಾಶ

*ಇನ್ನುಳಿದಂತೆ ಬೇರೆಲ್ಲಾ ವ್ಯವಹಾರಗಳಿಗೆ ಅನುಮತಿ ಇರುವುದಿಲ್ಲ.

ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಬೀದರ್, ಬೆಳಗಾವಿ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ.