HomeNewsಮಂಗಳೂರು | ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಮಂಗಳೂರು | ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಶುಕ್ರವಾರ ಉಳ್ಳಾಲದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ-ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಪತ್ತೆಯಾಗಿದೆ.

ಉಳ್ಳಾಲದ ಬಸ್ತಿಪಡು ನಿವಾಸಿ ಹಫೀಝ್ ಮೃತ
ದುರ್ದೈವಿ ಎಂದು ತಿಳಿದು ಬಂದಿದೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ರಾತ್ರಿಯಾದರೂ ಮನೆಗೆ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಹಫೀಝ್ ನ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು.

ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ ಬಳಿ ಹಫೀಝ್ ನ ಮೊಬೈಲ್, ಚಪ್ಪಲಿ ಪತ್ತೆಯಾಗಿತ್ತು. ಅದರಂತೆ ಉಳ್ಳಾಲ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿಗಳು ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದು ಇದೀಗ ಮೃತದೇಹ ಪತ್ತೆಯಾಗಿದೆ.

RELATED ARTICLES

Most Popular

Recent Comments