Home News ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ಬಂಟ್ವಾಳ : ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

Hindu neighbor gifts plot of land

Hindu neighbour gifts land to Muslim journalist

ಬಂಟ್ವಾಳ ತಾಲೂಕಿನ ಬಂಟ್ವಾಳ ಧರ್ಮಸ್ಥಳ ರಸ್ತೆಯ ಭಂಡಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವಿನಲ್ಲಿ ಶನಿವಾರ ಸಂಜೆ ಅಪಘಾತ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಕಕ್ಕೆಪದವು ನಿವಾಸಿ ಕೃಷ್ಣ ಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯ ಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಹ ಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅಪಾಯ ವಿಲ್ಲದೆ ಪಾರಾಗಿದ್ದಾರೆ.

ಬಂಟ್ವಾಳ ಬೈಪಾಸ್ ರಸ್ತೆಯಿಂದ ಬಂಟ್ವಾಳ ಪೇಟೆಗೆ ಭಂಡಾರಿ ಬೆಟ್ಟು ಎಂಬಲ್ಲಿಂದ ಎಸ್ಕೇಪ್ ರೋಡ್ ಗೆ ಕ್ರಾಸ್ ಮಾಡುವ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿ‌ಸಿಟಿ.ವಿಯಲ್ಲಿ ಸೆರೆಯಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಯ ಮೇಲೆ ಎಸೆಯುವ ದೃಶ್ಯ ಕೂಡ ಇದೆ. ಅದೃಷ್ಟವಶಾತ್ ಬೈಕ್ ಸವಾರ ಕೃಷ್ಣ ಮಯ್ಯ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಜೊತೆಗೆ ಸಹಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅವರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.