

ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ನಡೆದಿದೆ. ಅಪಘಾತವೂ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ, ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಯಿ ಮತ್ತು ಮಗ ಉಪ್ಪಿನಂಗಡಿಯ ತಮ್ಮ ಮನೆಗೆ ಕಡೆಗೆ ತೆರಳುವಾಗ ಅಪಘಾತ ಸಂಭವಿಸಿದೆ. ದ್ವಿ ಚಕ್ರ ವಾಹನದ ಒಂದು ಬದಿಗೆ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಆಗ ನಿಯಂತ್ರಣ ತಪ್ಪಿ ಬಾಲಕ ಹಾಗೂ ತಾಯಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ನಗರ ಸಂಚಾರಿ ಠಾಣೆ ಎಸ್ಐ ರಾಮನಾಯ್ಕ ಹಾಗೂ ಸಿಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.













