ಕಾವು ಮದ್ಲ : ಬಸ್ -ಬೈಕ್ ಡಿಕ್ಕಿ ಸವಾರ ಮೃತ್ಯು
ಪುತ್ತೂರು: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕಾವು ಸಮೀಪದ ಮದ್ಲ ಎಂಬಲ್ಲಿ ಕೆಎಸ್ಅರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ.
ದುರ್ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾ.2 ರಂದು ನಡೆದಿದೆ.
ಮೃತಪಟ್ಟ ಯುವಕನನ್ನು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಚಂದ್ರ ಗೌಡ ಎಂಬವರ ಮಗ ಪ್ರಶಾಂತ್ ಎಂದು ಗುರುತಿಸಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ಗೆ ತರಲಾಗಿದೆ.