Home News ಉಡುಪಿ ಸಂಬಂಧಿಕರ ಮನೆಗೆ ಬಂದಿದ್ದ ಯುವಕ ತೋಡಿಗೆ ಬಿದ್ದು ಸಾವು

ಸಂಬಂಧಿಕರ ಮನೆಗೆ ಬಂದಿದ್ದ ಯುವಕ ತೋಡಿಗೆ ಬಿದ್ದು ಸಾವು

Hindu neighbor gifts plot of land

Hindu neighbour gifts land to Muslim journalist

ಉಡುಪಿ :ಸಂಬಂಧಿಕರ ಮನೆಗೆ ಬಂದಿದ್ದ ಯುವಕನೋರ್ವ ಆಕಸ್ಮಿಕವಾಗಿ ತೋಡಿನ ನೀರಿನಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಕಲ್ಲಗುಂಡಿ ಎಂಬಲ್ಲಿ ಮಂಗಳವಾರ ನಡೆದಿದೆ.

ಮೃತ ಯುವಕನನ್ನು ಬಾಳೆಹೊನ್ನೂರಿನ ಪ್ರವೀಣ್ ( 19 ) ಎಂದು ಗುರುತಿಸಲಾಗಿದೆ.

ಬಾಳೆಹೊನ್ನೂರು ನಿವಾಸಿಯಾಗಿರುವ ಪ್ರವೀಣ್ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆಂದು ಬಂದಿದ್ದು ಮಂಗಳವಾರ ಮಧ್ಯಾಹ್ನ ಮನೆಯ ಸಮೀಪದ ತೋಡಿಗೆ ಮನೆಯವರೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಸಂದರ್ಭ ಆಕಸ್ಮಿಕವಾಗಿ ನೀರಿಗೆ ಬಿದ್ದು ಸುಳಿಗೆ ಸಿಕ್ಕಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.