Home Breaking Entertainment News Kannada ಪುನೀತ್ ರಾಜಕುಮಾರ್ ಅವರಿಗೆ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ತಂದ ಅಭಿಮಾನಿ ಹುಡುಗ

ಪುನೀತ್ ರಾಜಕುಮಾರ್ ಅವರಿಗೆ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ತಂದ ಅಭಿಮಾನಿ ಹುಡುಗ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿನ್ನೆ ವಿಧಿ ಲೀಲೆಗೆ ಬಲಿಯಾಗಿ ಹೋದ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಯೊಬ್ಬರು ಪುನೀತ್ ಗೆ ವಿಶೇಷ ಆಹಾರ ತಂದಿದ್ದಾರೆ. ಪುನೀತ್ ಗಾಗಿ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ಬದುಕಿದ್ದಾಗ ಕೊಡಲಾಗಲಿಲ್ಲ, ಈಗ ತೆಗೆದುಕೊಂಡು ಬಂದಿದ್ದೇನೆ ಎಂದು ತನ್ನ ಅಭಿಮಾನವನ್ನು ತೋರಿಸಿದ್ದಾರೆ.

ಬೆಂಗಳೂರಿನ ಯಲಹಂಕದಿಂದ ಬಂದಿರುವ ಅಭಿಮಾನಿ ಆನಂದ್, ಪುನೀತ್ ಅವರ ಅಂಗ ರಕ್ಷಕ ಚಿಕ್ಕಣ್ಣಗೆ ಪರಿಚಯಸ್ಥರಾಗಿದ್ದಾರೆ. ಇವರಿಗೆ ಪುನೀತ್ ಅವರನ್ನು ಭೇಟಿಯಾಗುವ ಆಸೆ ಇತ್ತು. ಅದು ಈಡೇರಿರಲಿಲ್ಲ. ಹೀಗಾಗಿ ಅವರ ಸಾವಿನ ಸುದ್ದಿ ಕೇಳಿ ಫ್ರೈಡ್ ರೈಸ್, ಗೋಬಿ ಮಂಚೂರಿಯನ್ನು ತಂದಿದ್ದರು.

ಆನಂದ್ ಫ್ರೈಡ್ ರೈಸ್, ಗೋಬಿ ವ್ಯಾಪಾರಿಯಾಗಿದ್ದಾರೆ. ಚಿಕ್ಕಣ್ಣನಿಗೆ, ಆನಂದ್ ಕೇಳಿದ್ದರು, ಒಮ್ಮೆ ಪುನೀತ್ ರನ್ನ ಪರಿಚಯ ಮಾಡಿಸಬೇಕು ಎಂದು. ಪುನೀತ್‍ಗೆ ಫ್ರೈಡ್ ರೈಸ್, ಗೋಬಿ ಮಂಚೂರಿ ಇಷ್ಟ ಅಂದಿದ್ದರು. ಬದುಕಿದ್ದಾಗ ಕೊಡಲಾಗಲಿಲ್ಲ. ಈಗ ತೆಗದುಕೊಂಡು ಬಂದಿದ್ದೇನೆ ಎಂದು ಹೇಳುತ್ತಾ ಆನಂದ್ ಭಾವುಕರಾಗಿದ್ದಾರೆ. ಏನೋ ಅವರು ತಮ್ಮ ಸಮಾಧಾನಕ್ಕೆ ಹಾಗೆ ಮಾಡಿದ್ದಾರೆ ಅನ್ನಿಸುತ್ತಿದೆ. ಆ ಮೂಲಕ ಅಗಲಿದ ಚಿತ್ರ ನಟನಿಗೆ ಮತ್ತು ತಮ್ಮ ಪ್ರೀತಿಯ ಹೀರೋಗೆ ತಮ್ಮ ಸಂತಾಪ ಸೂಚಿಸಿದ್ದಾರೆ.