Home latest ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವು

Hindu neighbor gifts plot of land

Hindu neighbour gifts land to Muslim journalist

ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.

ಶ್ರೀರಾಂಪುರ ಪ್ರದೇಶದಲ್ಲಿರುವ ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್) ನಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಮೇಲ್ಛಾವಣಿಯ ಒಂದು ಭಾಗ ನಾಲ್ವರು ಕಾರ್ಮಿಕರ ಮೇಲೆ ಬಿದ್ದಿದ್ದು, ಅವರು ಅವಶೇಷಗಳಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರ

ಈ ಕುರಿತಂತೆ ಎಸ್‍ಸಿಸಿಎಲ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಸೂಚನೆ ನೀಡಿದ್ದಾರೆ.

ಈ ಸಂಬಂಧ ಉನ್ನತ ಅಧಿಕಾರಿಗಳು ಸಂತ್ರಸ್ತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ 70 ಲಕ್ಷದಿಂದ 1 ಕೋಟಿ ನಡುವೆ ಪರಿಹಾರ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.