Home Breaking Entertainment News Kannada ಮಂಗಳೂರು : ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ಕಲಾವಿದರಿಗೆ...

ಮಂಗಳೂರು : ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ಕಲಾವಿದರಿಗೆ 50 ಸಾವಿರ ರೂ ಸಹಾಯಧನ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ಯಕ್ಷದ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು, ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಮಂದಿರದ ಆಡಳಿತ ಸಮಿತಿ ಹಾಗೂ ಅಡ್ಯಾರು ಗ್ರಾಮದ ನಾಗರಿಕರಿಂದ ಸ್ಯಾಂಡಲ್ ವುಡ್ ನ ನಾಯಕ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇವರಿಗೆ ನುಡಿ ನಮನದ ಶ್ರದ್ಧಾಂಜಲಿ ಕಾರ್ಯಕ್ರಮ ಅಡ್ಯಾರ್ ಶ್ರೀ ವೀರಾಂಜನೇಯ ಸ್ವಾಮಿ ಮಂದಿರದಲ್ಲಿ ಜರಗಿತು.

ಮಂಗಳೂರಿನ ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಮಂದಿರದ ಕೀರ್ತಿಶೇಷ ರಾಮಣ್ಣ ನಾಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಮಾತನಾಡಿ ತನ್ನ ಪ್ರಬುದ್ಧ ನಟನೆಯಿಂದಾಗಿ ಜನಮಾನಸದಲ್ಲಿ ಮನೆ ಮಾತಾಗಿದ್ದ ಪುನೀತ್ ರಾಜ್‌ಕುಮಾರ್ ಶ್ರೇಷ್ಠ ಕಲಾವಿದ, ಮಾತ್ರವಲ್ಲದೆ ಹೃದಯವಂತನಾಗಿ, ಸರಳ ನಡೆ ನುಡಿಯಿಂದ, ಸಮಾಜಮುಖಿ ಕಾರ್ಯಗಳಿಂದಾಗಿ, ಕನ್ನಡಿಗರ ಪ್ರೀತಿಯ ಅಪ್ಪುವಾಗಿ, “ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ “ಎಂಬಂತೆ ಜನಪರ ಕಾರ್ಯಯೋಜನೆಗಳ ಮುಖಾಂತರ ಸಹಸ್ರಾರು ಕುಟುಂಬಗಳ ನಂದಾದೀಪವಾಗಿ ಬೆಳಗಿದವರು. ಆದರೆ ಆ ನಂದಾದೀಪ ಆರಿ ಹೋಗಿ ಚಿತ್ರೋದ್ಯಮಕ್ಕೆ ಮಾತ್ರವಲ್ಲದೆ ಸಮಸ್ತ ಕನ್ನಡಾಭಿಮಾನಿಗಳಿಗೆ, ಕಲಾಭಿಮಾನಿಗಳಿಗೆ ಮರೆಯಲಾಗದ ನೋವನ್ನು ಉಂಟು ಮಾಡಿದೆ ಎಂದರು.

ಪುನೀತ್ ರಾಜ್ ಕುಮಾರ್ ರವರ ಕುಟಂಬದೊಂದಿಗೆ ನಿಕಟ ಸಂಪರ್ಕ ಸಂಬಂಧವನ್ನು ಮೆಲುಕು ಹಾಕಿದ ಪಟ್ಲರು ಕೆಲ ದಿನಗಳ ಹಿಂದೆ ಪುನೀತ್‌ರವರೊಡನೆ ಕಳೆದ ಕ್ಷಣಗಳನ್ನು ನೆನೆದು ಗದ್ಗತಿತರಾದರು. ಪುನೀತ್ ಸ್ಮರಣಾರ್ಥವಾಗಿ ಯಕ್ಷಗಾನ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೇಪಥ್ಯ ಕಲಾವಿದರಾಗಿ (ರಂಗಸ್ಥಳದ ಗುಂಡಿ ತೆಗೆಯುತ್ತಾ, ರಂಗಸ್ಥಳದಲ್ಲಿ ತೆರೆದೊಂದಿ ಹಿಡಿಯುತ್ತಾ ಕರ್ತವ್ಯ ನಿರ್ವಹಿಸಿದ ಬಡ ಕುಟುಂಬದ) ಕಲಾವಿದ ರಘು ನಾಳರವರ ಮಗಳ ಮದುವೆಗಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ 50 ಸಾವಿರ ರೂಪಾಯಿಗಳ ಸಹಾಯಧನವನ್ನು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘದ ಅಧ್ಯಕ್ಷರಾದ ರಾಜವರ್ಮ ಬಲ್ಲಾಳ್‌ರವರು ಗೌರವಪೂರ್ವಕವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ 50 ಜನ ಅಡ್ಯಾರು ಗ್ರಾಮದ ಗ್ರಾಮಸ್ಥರು ನೇತ್ರದಾನವನ್ನು ಮಾಡುವ ಸಂಕಲ್ಪವನ್ನು ಕೈಗೊಂಡರು._