ಕಾಠ್ಮಂಡು: ಮನಕಾಮನ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಮರಳುತ್ತಿದ್ದ ಭಕ್ತರ ಬಸ್ ಅಪಘಾತಕ್ಕೀಡಾಗಿರುವ ಘಟನೆ ನೇಪಾಳದ ಗೂರ್ಖಾ ಜಿಲ್ಲೆಯಲ್ಲಿ ನಡೆದಿದೆ. 8 ಭಕ್ತರಿದ್ದ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಈ ದುರ್ಘಟನೆ ನಡೆದಿದೆ.

8 ಮಂದಿನ್ನು ಗೂರ್ಖಾ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ 7 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇವರೆಲ್ಲರೂ ಭಾರತೀಯರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಪ್ರಯಾಣಿಕರು ಹೆಚ್ಚಾಗಿದ್ದ ಕಾರಣ ಬಸ್ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ ಎಂದು ಗೂರ್ಖಾ ಜಿಲ್ಲಾ ಪೊಲೀಸ್ ಹೇಳಿದ್ದಾರೆ.
