ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ ಸಂಬಂಧ ಚಿಕ್ಕಮಗಳೂರು ಎಸ್ ಪಿ ಹಾಗೂ ಎಸ್ಐಟಿ ಮುಖ್ಯಸ್ಥರನ್ನು ಭೇಟಿಯಾಗಲುತ್ತಿದ್ದ ಅಧಿಕಾರಿಗಳ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ನಾಲ್ವರು ಎಸ್ಐಟಿ ಅಧಿಕಾರಿಗಳು ಪವಾಡ ಸದೃಶ ಪಾರಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.


ಬುರುಡೆ ಚಿನ್ನಯ್ಯ ಮೊನ್ನೆ ತಾನೇ ಹೈಕೋರ್ಟಿಗೆ ರಿಟ್ ಅರ್ಜಿಯೊಂದನ್ನು ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಎಸ್ಐಟಿ ವಿಭಾಗದ ಎಸ್ ಪಿ ಸಿಎ ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್ ಸಿಬ್ಬಂದಿಯಾದ ಮಂಜುನಾಥ್ ಪಿ ಸಿ ಇವರು ಚಿಕ್ಕಮಗಳೂರು ಜಿಲ್ಲಾ ಎಸ್ ಪಿ ಹಾಗೂ ಅಲ್ಲಿನ ಎಸ್ಐಟಿ ಅಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ಇನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಚಾರ್ಮಾಡಿ ಘಾಟಿ ತಲುಪುತ್ತಿದ್ದಂತೆ ನಿಯಂತ್ರಣ ಕಳಕೊಂಡ ಇನ್ನೋವಾ ಕಾರು ರಸ್ತೆಯಲ್ಲಿ ಇದ್ದಕ್ಕಿದ್ದಂತೆ ಪಲ್ಟಿಯಾಗಿ ಮಗುಚಿ ಬಿದ್ದಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸದೆ ಅಧಿಕಾರಿಗಳು ಪಾರಾಗಿದ್ದಾರೆಂದು ಬಂದಿದೆ.
