Home » ಮತ್ತೊಂದು ಖಾಸಗಿ ಬಸ್‌ ಅಗ್ನಿ ಅವಘಡ: ಹೊತ್ತಿ ಉರಿದ ಬಸ್‌, ತಪ್ಪಿದ ಭಾರೀ ಅನಾಹುತ

ಮತ್ತೊಂದು ಖಾಸಗಿ ಬಸ್‌ ಅಗ್ನಿ ಅವಘಡ: ಹೊತ್ತಿ ಉರಿದ ಬಸ್‌, ತಪ್ಪಿದ ಭಾರೀ ಅನಾಹುತ

0 comments

ನೆಲಮಂಗಲ: ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್‌ವೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ ಬೆಂಕಿಗೆ ಅಹುತಿಯಾಗಿರುವ ಘಟನೆ ನಡೆದಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್‌ ಬಳಿ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ಗೆ ಬೆಂಕಿ ಹತ್ತಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಕಿಗೆ ಆಹುತಿಯಾದ ಬಸ್‌ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿತ್ತು. ಹನುಮಂತಪುರ ಗೇಟ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಬಸ್‌ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ ಚಾಲಕರು ಸೇರಿ 40 ಮಂದಿ ಪ್ರಯಾಣಿಕರು ಎಲ್ಲರೂ ಅದೃಷ್ಟವಶಾತ್‌ ಪಾರಾಗಿದ್ದಾರೆ.

ಇನ್ನು ಬಸ್‌ ಲಗೇಜ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ವಸ್ತುಗಳೆಲ್ಲ ಸುಟ್ಟು ಭಸ್ಮವಾಗಿದೆ. ಬೆಂಕಿ ದೊಡ್ಡ ಪ್ರಮಾಣದಲ್ಲಿ ವ್ಯಾಪಿಸಿದ ಕಾರಣ ಬೆಲೆಬಾಳುವ ವಸ್ತುಗಳೆಲ್ಲ ಹೊತ್ತಿ ಉರಿದಿದೆ.

banner

 

You may also like