ಬೆಳ್ತಂಗಡಿ: ಕಾಶಿಬೆಟ್ಟು ಸಮೀಪ ಇಂದು (ಮಾ.11) ಸಾಯಂಕಾರ ಮಹೀಂದ್ರಾ ಥಾರ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ಗೆ ಅಪ್ಪಳಿಸಿದ ಘಟನೆ ನಡೆದಿದೆ. ಪರಿಣಾಮ ಕಾರು ಹಾನಿಗೊಳಗಾಗಿದೆ.

ಕಾರಿನ ಮುಂಭಾಗ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದ ಏರ್ಬ್ಯಾಗುಗಳು ಸಮಯಕ್ಕೆ ಸರಿಯಾಗಿ ತೆರೆದ ಕಾರಣ ಒಳಗಿದ್ದ ಚಾಲಕ, ಸಹಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರು ಕೂಡಲೇ ಸಹಾಯಕ್ಕೆ ಬಂದಿದ್ದು, ಗಾಯಗೊಂಡ ಚಾಲಕನನ್ನು ಚಿಕಿತ್ಸೆಗೆ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಾರು ಬೆಳ್ತಂಗಡಿಯಿಂದ ಉಜಿರೆ ಭಾಗಕ್ಕೆ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
