Home » ಬೆಳ್ತಂಗಡಿ: ಬೈಕ್‌ ಅಪಘಾತ: ಸಹಸವಾರ ವಿದ್ಯಾರ್ಥಿ ಸಾವು, ಸವಾರ ಗಂಭೀರ

ಬೆಳ್ತಂಗಡಿ: ಬೈಕ್‌ ಅಪಘಾತ: ಸಹಸವಾರ ವಿದ್ಯಾರ್ಥಿ ಸಾವು, ಸವಾರ ಗಂಭೀರ

0 comments

ಬೆಳ್ತಂಗಡಿ: ಬೈಕ್‌ ಸ್ಕಿಡ್‌ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಹಸವಾರ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.

ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್‌ ಮುಂಭಾಗದ ಡಿವೈಡರ್‌ಗೆ ಮಾ.28 ರಂದು ರಾತ್ರಿ ಸುಮಾರು 12.30 ಗಂಟೆಗೆ ಕಾರ್ಯಕ್ರಮ ಮುಗಿಸಿ ವಾಪಸ್‌ ಬರುತ್ತಿದ್ದಾಗ ಕೆ.ಟಿ.ಎಮ್‌ ಕಂಪನಿಯ ಬೈಕ್‌ ಸ್ಕಿಡ್‌ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್‌ ಪುತ್ರ ನಿತೇಶ್‌ (19) ಮೃತಪಟ್ಟ ಯುವಕ ಎಂದು ವರದಿಯಾಗಿದೆ. ಬೈಕ್‌ ಸವಾರ ಪುತ್ತೂರು ಇಡ್ಕಿದು ನಿವಾಸಿ ಲಿಖಿತ್‌ (20) ನಿವಾಸಿ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಇಬ್ಬರು ಉಜಿರೆ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು. ಉಜಿರೆ ಕಾಲೇಜು ರಸ್ತೆಯಲ್ಲಿ ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

banner

You may also like