ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಅಪಾಯಕಾರಿ ತಿರುವುಗಳಲ್ಲಿ ಅಪಘಾತಗಳ ಸರಣಿ ಮುಂದುವರೆದಿದ್ದು, ಏ.26 ರಂದು ಇಂದು ಘಾಟಿಯ 8ನೇ ತಿರುವಿನಲ್ಲಿ ಅಶೋಕ್ ಲೈಲ್ಯಾಂಡ್ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಸರಕು ಸಾಗಣೆ ಮಾಡುತ್ತಿದ್ದ ಈ ಮಿನಿ ಲಾರಿಯಲ್ಲಿ ಕೆಲವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ವಾಹನವು ಚಾಲಕನ ಹತೋಟಿ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ.
ಪರಿಣಾಮವಾಗಿ ವಾಹನದಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
