Home » ದ.ಕ: ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು

ದ.ಕ: ಬಾವಿಯ ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು

0 comments

ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಓರ್ವರ ಕಾಲಿಗೆ ಗಾಯವಾಗಿದೆ. ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ ಹಗ್ಗ ಹಿಡಿದು ಮೇಲೆಕ್ಕೆ ಬರುತ್ತಿದ್ದ ವೇಳೆ ಹಗ್ಗ ಕಡಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಸುಮಾರು 40 ಅಡಿ ಆಳದ ಬಾವಿ ಇದಾಗಿದ್ದು, ಅರ್ಧಕ್ಕೆ ಬರುತ್ತಿದ್ದಂತೆ ಹಗ್ಗ ಕಡಿದಿದೆ ಎಂದು ಹೇಳಲಾಗಿದೆ.

ಬಾವಿಯೊಳಗೆ ಬಿದ್ದ ಇಬ್ಬರಲ್ಲಿ ಒಬ್ಬರ ಕಾಲಿಗೆ ಸಣ್ಣಪುಟ್ಟ ಗಾಯವಾಗಿದ್ದು ಇನ್ನೊಬ್ಬರು ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

You may also like