ಸೋಮವಾರ ಬೆಳಗಿನ ಜಾವ ಬ್ಯಾಂಕಾಕ್ನ ಪಬ್ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ. ಹಾಗೂಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಅವಘಡ ನಡೆದ ಕೂಡಲೇ ಕೆಲವೇ ನಿಮಿಷಗಳಲ್ಲಿ ಬೆಂಕಿಯು ಸ್ಥಳದಾದ್ಯಂತ ವ್ಯಾಪಿಸಿದ್ದು, ಅಗ್ನಿಶಾಮಕ ದಳದವರು ಅದನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗುವ ಮೊದಲೇ ಡಜನ್ಗಟ್ಟಲೆ ಜನರು ಒಳಗೆ ಸಿಲುಕಿಕೊಂಡರು.

ಅಸೋಸಿಯೇಟೆಡ್ ಪ್ರೆಸ್ ಪ್ರಕಾರ, ಉತ್ತರ ಬ್ಯಾಂಕಾಕ್ನ ನಾ ಲಾಡ್ಪ್ರಾವ್ ಪಬ್ನಲ್ಲಿ ಮಧ್ಯರಾತ್ರಿಯ ನಂತರ ಬೆಂಕಿ ಕಾಣಿಸಿಕೊಂಡಿದ್ದು, ದೊಡ್ಡ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಥಾಯ್ ರಾಜಧಾನಿಯಲ್ಲಿ ಪಬ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡ 63 ಜನರಲ್ಲಿ 22 ಜನರ ಸ್ಥಿತಿ ಗಂಭೀರವಾಗಿದೆ ಎಂದು ಬ್ಯಾಂಕಾಕ್ ಗವರ್ನರ್ ನಂತರ ತಿಳಿಸಿದ್ದಾರೆ.
ಮಧ್ಯರಾತ್ರಿಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಗಳು ಬಂದವು ಮತ್ತು ತಕ್ಷಣವೇ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಯಿತು ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ಬೆಂಕಿಯ ನಂತರ ಸ್ಥಳಕ್ಕೆ ಭೇಟಿ ನೀಡಿದ ಥೈಲ್ಯಾಂಡ್ ಪ್ರಧಾನಿ ಅನುಟಿನ್ ಚಾರ್ನ್ವಿರಕುಲ್, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದರು. ಇತರ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಮಾರಕ ಬೆಂಕಿಗೆ ಕಾರಣವೇನೆಂದು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

