

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ ನಡೆದಿದ್ದು, ಈ ದುರ್ಘಟನೆಯಲ್ಲಿ ಏಳು ಜನರು ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ.
ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಒಂದೇ ಕಾರಿನಲ್ಲಿದ್ದ ಆರು ಜನ ಹಾಗೋ ಓರ್ವ ಬೈಕ್ ಸವಾರ ಸೇರಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತಕ್ಕೀಡಾದ XUV 700 ಕಾರು (ಸಂಖ್ಯೆ ಕೆಎ 03-NW 0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿತ್ತು. ಕಾರಿನಲ್ಲಿದ್ದ ಆರು ಜನ ಮೃತಪಟ್ಟಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಸದ್ಯ ಮೃತದೇಹಗಳನ್ನು ಹೊಸಕೋಟೆಯ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.













