

ಉಳ್ಳಾಲ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಮಂಗಳವಾರ ನಡೆದಿದೆ.
ಬೋಳಿಯಾರ್ ನಿವಾಸಿ ಬಿ.ಎಚ್.ಕರೀಂ ಎಂಬುವವರ ಪುತ್ರ ಮಹಮ್ಮದ್ ರಿಜ್ವಾನ್ (28) ಮೃತಪಟ್ಟ ಯುವಕ.
ಮೀನು ಸಾಗಾಟದ ಲಾರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿರುವ ರಿಝ್ವಾನ್ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದು, ಮಹಾರಾಷ್ಟ್ರದ ರತ್ನಗಿರಿ ಎನ್ನುವಲ್ಲಿ ಮಂಗಳವಾರ ಬೆಳಗ್ಗೆ ಲಾರಿಗಳ ಮಧ್ಯೆ ನಡೆದ ಅಪಘಾತದಲ್ಲಿ ಗಂಭಿರ ಗಾಯಗೊಂಡಿದ್ದ ರಿಝ್ವಾನ್ ಸ್ಥಳದಲ್ಲಿಯೇ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತ ರಿಝ್ವಾನ್ ಅವರು ತಂದೆ, ತಾಯಿ, ಪತ್ನಿ, ಎರಡು ವರ್ಷದ ಮಗು ಸೇರಿ ಮೂವರು ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ. ರಿಝ್ವಾನ್ ಮೃತದೇಹವು ಬುಧವಾರ ಬೆಳಿಗ್ಗೆ ಬೋಳಿಯಾರಿಗೆ ತಲುಪಲಿದೆ ಎಂದು ಕುಟುಂಬ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
