ಮದ್ದಡ್ಕ: ಬೆಳ್ತಂಗಡಿ ತಾಲೂಕಿನ ಮದ್ದಡ್ಕ ಮಸೀದಿ ಬಳಿ ಜು. 18 ರಂದು ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೇಶವ ಗೌಡ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಿನಿ ಟೆಂಪೋ ಮತ್ತು ಬೈಕ್ ನಡುವೆ ನೇರ ಡಿಕ್ಕಿ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ರಸ್ತೆಗೆ ಬಿದ್ದು ನಜ್ಜುಗುಜ್ಜಾಗಿದೆ. ಬೈಕ್ನಲ್ಲಿ ಸಹಸವಾರರಾಗಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಅಪಘಾತ ನಡೆದ ತಕ್ಷಣ ಸ್ಥಳದಲ್ಲಿ ಜನರು ಜಮಾಯಿಸಿದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಟೆಂಪೋ ಚಾಲಕನ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
