Home » ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್‌ ಡಿಕ್ಕಿ, ಹಿಂಬದಿ ಸವಾರೆ ದಾರುಣ ಸಾವು

ಮಂಗಳೂರು: ನಂತೂರಿನಲ್ಲಿ ಭೀಕರ ಅಪಘಾತ: ಸ್ಕೂಟರ್‌ಗೆ ಬಸ್‌ ಡಿಕ್ಕಿ, ಹಿಂಬದಿ ಸವಾರೆ ದಾರುಣ ಸಾವು

0 comments

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ನಗರದ ನಂತೂರು ವೃತ್ತದ ಬಳಿ ಸ್ಕೂಟರ್‌ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು, ಹಿಂಬದಿ ಸವಾರೆ ಮೇಲೆ ಬಸ್‌ ಹರಿದ ಪರಿಣಾಮ ಆಕೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.

ಬಳ್ಳಾಲ್‌ ಬಾಗ್‌ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ.

ತನ್ನ ಭಾವೀ ಪತಿ ಜೊತೆ ಶಿವಭಾಗ್‌ ಕಡೆಯಿಂದ ಸ್ಕೂಟರ್‌ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು. ಈ ವೇಳೆ ಕದ್ರಿ ಶಿವಭಾಗ್‌ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್‌ ಡಿಕ್ಕಿ ಹೊಡೆದಿದ್ದು, ಹಿಂಬದಿಯಲ್ಲಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಆಗ ಬಸ್‌ ಆಕೆಯ ಹೊಟ್ಟೆಯ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕೂಡಲೇ ಎಜೆ ಆಸ್ಪತ್ರೆಗೆ ಕೊಂಡೊಯ್ಯುವಾಗ ದಾರಿ ಮಧ್ಯೆಯೇ ಆಕೆ ಅಸುನೀಗಿದ್ದಾರೆ.

ಸವಾರ ಯುವ ಅಪಾಯದಿಂದ ಪಾರಾಗಿದ್ದು, ನಂತೂರು ಬಳಿಯ ಬಸ್‌ ನಿಲ್ದಾಣದ ಎದುರಿನಲ್ಲಿಯೇ ಈ ಘಟನೆ ನಡೆದಿದೆ. ಕುಡುಪಿ ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್‌ ಡಿಕ್ಕಿಯಾಗಿದೆ. ಬಸ್‌ ವೇಗವಾಗಿತ್ತೇ?, ಸ್ಕೂಟರ್‌ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಇನ್ನೂ ತಿಳಿದುಲ್ಲ ಬಂದಿಲ್ಲ ಎಂದು ಕದ್ರಿ ಪೊಲೀಸರು ಹೇಳಿದ್ದಾರೆ.

banner

ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್‌ಡೇ ಪಾರ್ಟಿಗೆ ತೆರಳುತ್ತಿದ್ದರೆಂದು ತಿಳಿದು ಬಂದಿದೆ.

You may also like