ಪೆಟ್ರೋಲ್ ಟ್ಯಾಂಕರ್ ಲಾರಿ ಒಂದು ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ನಡೆದಿದೆ.

ಪೆಟ್ರೋಲ್ ಟ್ಯಾಂಕರ್ ಲಾರಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ, ಅಗ್ನಿ ಜ್ವಾಲೆ ಪಕ್ಕದಲ್ಲಿ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್ಗೂ ವ್ಯಾಪಿಸಿದೆ. ಚಾಲಕರು ಸಮಯಕ್ಕೆ ಸರಿಯಾಗಿ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಚಾಲಕನ ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
