Home Accident ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್‌ ಕಂಬಕ್ಕೆ ಹಾನಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ: ವಿದ್ಯುತ್‌ ಕಂಬಕ್ಕೆ ಹಾನಿ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಬೈಪಾಸ್‌ ರಸ್ತೆಯ ಉರ್ಲಾಂಡಿಯಲ್ಲಿ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಫೆ.5 ರ ತಡರಾತ್ರಿ ನಡೆದಿದೆ.

ತಮಿಳುನಾಡು ನೋಂದಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದು, ಬೈಪಾಸ್‌ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಪಕ್ಕದ ವಿದ್ಯುತ್‌ ಕಂಬದ ಮೇಲೆ ಬಿದ್ದಿದೆ.

ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿದ್ದು, ರಾತ್ರೋರಾತ್ರಿ ಲಾರಿಯನ್ನು ರಸ್ತೆಯಿಂದ ತೆರವು ಮಾಡಿ ವಾಹನ ಸಂಚಾರಕ್ಕೆ ಸುಗಮ ಮಾಡಲಾಗಿದೆ.