ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ನಟ ಸುದೀಪ್ ಹಾಗೂ ಸಚಿವ ಶಾಸಕರು ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.


ಅಗ್ನಿ ಶಾಮಕದಳದ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ.
ಸಿಂಧನೂರಿನ ತಾಲೂಕು ಕ್ರೀಡಾಂಗಣದಲ್ಲಿ ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಫೌಂಡೇಷನ್ ರವಿವಾರ 151 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಮುಗಿಯುವಷ್ಟರಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ವೇದಿಕೆ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ವೈಯರ್, ಸ್ಪೀಕರ್, ಬಟ್ಟೆಗಳಿಗೆ ಬೆಂಕಿ ಕಿಡಿ ತಾಗಿದೆ. ಡಿಕೆ ಶಿವಕುಮಾರ್ ಹಾಗೂ ಗಣ್ಯರು ಇದ್ದ ಸಂದರ್ಭದಲ್ಲಿಯೇ ಬೆಂಕಿ ಕಾಣಿಸಿದೆ. ಸ್ಥಳದಲ್ಲಿದ್ದ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ.

