ಉಜಿರೆ, ಜೂನ್ 9: ಬೆಳ್ತಂಗಡಿ ಕಡೆಯಿಂದ ಉಜಿರೆ ಬರುತ್ತಿದ್ದ ಕಾರು ಉಜಿರೆಯ ಕಾಶಿಬೆಟ್ಟು ಪ್ರಗತಿ ನಗರದಲ್ಲಿ ಮುಂಜಾನೆ ರಸ್ತೆ ಬದಿಯ ಚರಂಡಿಗೆ ಮಾರುತಿ ಸುಜುಕಿ ವ್ಯಾಗನ್ ಆರ್ ಕಾರು ಉರುಳಿ ಬಿದ್ದ ಘಟನೆ ನಡೆದಿದೆ.


KA53MA1340 ನೋಂದಣಿ ಸಂಖ್ಯೆಯ ಮೂರು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಆಳವಾದ ಚರಂಡಿಗೆ ಉರುಳಿ ಬಿದ್ದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯರ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮಳೆಗಾಲದ ಕಾರಣ ಚರಂಡಿಯಲ್ಲಿ ನೀರು ತುಂಬಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಕಾರಣವೇನು?ಮಳೆಗಾಲ ಆರಂಭವಾಗಿದ್ದು, ರಸ್ತೆ ಬದಿ ಯಾವುದೇ ತಡೆಗೋಡೆ ಅಥವಾ ಸೂಚನಾ ಫಲಕ ಇಲ್ಲದಿರುವುದು ಅವಘಡಕ್ಕೆ ಕಾರಣ ಎನ್ನಲಾಗಿದೆ.
ಕಾಶಿಬೆಟ್ಟು-ಪ್ರಗತಿ ನಗರ ರಸ್ತೆ ಕಿರಿದಾಗಿದ್ದು, ಈ ಭಾಗದಲ್ಲಿ ಈ ಹಿಂದೆಯೂ ಸಣ್ಣಪುಟ್ಟ ಅಪಘಾತಗಳು ಸಂಭವಿಸಿವೆ ಎಂದು ಸ್ಥಳೀಯರು ದೂರಿದ್ದಾರೆ.
ಉಜಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರನ್ನು ಮೇಲಕ್ಕೆತ್ತುವ ಕಾರ್ಯ ನಡೆದಿದೆ.

