Home » ಉಪ್ಪಿನಂಗಡಿ: ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸಾವು

ಉಪ್ಪಿನಂಗಡಿ: ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸಾವು

0 comments

ಉಪ್ಪಿನಂಗಡಿ: ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತರಾಗಿದ್ದ ಚಿಂದಾನಂದ ಗೌಡ (56) ಅವರು ಮೃತಪಟ್ಟ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ 34ನೇ ನೆಕ್ಕಿಲಾಡಿ ಬೊಳ್ಳಾರ್‌ ಎನ್ನುವಲ್ಲಿ ಈ ಘಟನೆ ಮಾ.8 ರಂದು ನಡೆದಿದೆ.

ಬಂದಾರು ಗ್ರಾಮದ ಕುರಾಯ ನಿವಾಸಿಯಾಗಿರುವ ಚಿದಾನಂದ ಗೌಡ ಅವರು ತಮ್ಮ ಕೆಲಸದ ನಿಮಿತ್ತ ಬೈಕ್‌ನಲ್ಲಿ ಸಂಚಾರ ಮಾಡುತ್ತಿದ್ದು. ಈ ಸಂದರ್ಭದಲ್ಲಿ ಬೊಳ್ಳಾರ್‌ ಬಳಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ವೇಗಕ್ಕೆ ಗಂಭೀರ ಗಾಯಗೊಂಡಿದ್ದ ಚಿದಾನಂದ ಗೌಡ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಮೃತರು ತಾಯಿ, ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

You may also like